ಗೃಹಜ್ಯೋತಿ- ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅಪ್ಲಿಕೇಷನ್: ಪೊಲೀಸ್ ಇಲಾಖೆಯಿಂದ ಎಚ್ಚರಿಕೆ

Arun Kumar
0

ಉಡುಪಿ: ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ಕಾರ್ಯಾಚರಿಸುತ್ತಿರುವ ನಕಲಿ ಅಪ್ಲಿಕೇಷನ್‌ಗಳ ಕುರಿತು ಸಾರ್ವಜನಿಕರು ಎಚ್ಚರ ವಹಿಸುವಂತೆ ಉಡುಪಿ ಪೊಲೀಸ್ ಇಲಾಖೆ ಮನವಿ ಮಾಡಿದೆ.

ಈ ರೀತಿಯ ನಕಲಿ ಅಪ್ಲಿಕೇಷನ್‌ಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಇನ್‌ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ಸೈಬರ್ ಕಳ್ಳರು ಮೆಸೇಜ್ ಮೂಲಕ ಹಾಗೂ ವಾಟ್ಸಾಪ್ ಮೂಲಕ ಈ ಬಗ್ಗೆ ನೀಡುವ ಯಾವುದೇ ಲಿಂಕ್‌ನ್ನು ಬಳಸಬಾರದು. ಈ ರೀತಿಯಾದ ಲಿಂಕ್ ಕ್ಲಿಕ್ ಮಾಡಿದಾಗ ನಿಮ್ಮ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಬಹುದು.

ಯಾವುದೇ ಹೆಲ್ಪ್‌ಡೆಸ್ಕ್ ನಿಂದ ಕರೆ ಮಾಡಿ ನೀವು ಈ ಯೋಜನೆಗೆ ಆಯ್ಕೆಯಾಗಿದ್ದಿರಿ, ನಿಮ್ಮ ವೈಯುಕ್ತಿಕ ವಿವರಗಳನ್ನು ನೀಡುವಂತೆ ತಿಳಿಸಿದ್ದಲ್ಲಿ ಕೂಡ ಯಾವುದೇ ಮಾಹಿತಿ ನೀಡಬಾರದು. ಸಾರ್ವಜನಿಕರು ಇಂತಹ ನಕಲಿ ಅಪ್ಲಿಕೇಷನ್‌ಗಳ ಮೂಲಕ ತಮ್ಮ ವೈಯಕ್ತಿಕ ಆಧಾರ್, ಪ್ಯಾನ್ ಕಾರ್ಡ್ ಮಾಹಿತಿ ನೀಡಿ ಮೋಸ ಹೋಗಬಾರದು.

ಈ ಯೋಜನೆಗಳಿಗೆ ಸಂಬಂಧಿಸಿದಂತೆ ಸರಕಾರವು ಇದುವರೆಗೂ ಯಾವುದೇ ಅಂಡ್ರಾಯ್ಡಾ ಅಪ್ಲಿಕೇಷನ್ ಅನ್ನು ಬಿಡುಗಡೆ ಮಾಡಿರುವುದಿಲ್ಲ. ಈ ಯೋಜನೆ ಗಳ ನೋಂದಣಿಗಾಗಿ ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡ ಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)