ಸುರಿಯುವ ಮಳೆ ನೀರನ್ನು ಕುಡಿದು ದಣಿವಾರಿಸಿಕೊಂಡ ವ್ಯಾಘ್ರ!!

Arun Kumar
0

ಚಾಮರಾಜನಗರ: ಚಾಮರಾಜನಗರ ಜಿಲ್ಲಾದ್ಯಂತ ಕಳೆದ 3 ದಿನಗಳಿಂದ ತುಂತುರು ಮಳೆಯಾಗುತ್ತಿದ್ದು ಬಂಡೀಪುರ ಅರಣ್ಯ ಪ್ರದೇಶದಲ್ಲೂ ಬಿರುಸಿನ ಮಳೆಯಾಗುತ್ತಿದೆ.

ಧೋ ಎಂದು ಸುರಿಯುವ ಮಳೆ ನೀರನ್ನು ಕುಡಿದು ಹುಲಿಯೊಂದು ದಣಿವಾರಿಸಿಕೊಂಡ ದೃಶ್ಯ ಬಂಡೀಪುರ ಸಫಾರಿಗೆ ತೆರಳಿದ್ದ ವೇಳೆ ಸೆರೆಯಾಗಿದ್ದು ಸದ್ಯ ದೃಶ್ಯ ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ಲಾಗಿದೆ.

ಸುರಿಯುತ್ತಿದ್ದ ಮಳೆಯಿಂದ ರಸ್ತೆ ಮಧ್ಯದ ಹಳ್ಳದಲ್ಲಿ ನಿಂತಿದ್ದ ನೀರನ್ನು ಹುಲಿಯೊಂದು ಕುಸಿಯುತ್ತಿರುವುದನ್ನು ಸಫಾರಿಗೆ ತೆರಳಿದವರು ಸೆರೆ ಹಿಡಿದಿದ್ದು ವ್ಯಾಘ್ರನನ್ನು ಕಂಡ ಸಫಾರಿಗರು ರೋಮಾಂಚಿತರಾಗಿದ್ದಾರೆ.

ಇನ್ನು, ವೀಡಿಯೋ ಬಂಡೀಪುರ ಸಫಾರಿಯಲ್ಲಿ ತೆಗೆದಿದ್ದಾಗಿದೆ ಎಂದು ಸಿಎಫ್ಒ ರಮೇಶ್ ಕುಮಾರ್ ದೃಢಪಡಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)