ಗಡಿ ಜಿಲ್ಲೆಯಲ್ಲಿ "ಹೊನ್ನೇರು" ಸಂಭ್ರಮ, ಏನಿದು? ಯುಗಾದಿಗೂ ಇದಕ್ಕೂ ಏನು ಸಂಬಂಧ?-ಮಾಹಿತಿ

Arun Kumar
0

ಚಾಮರಾಜನಗರ, ಏಪ್ರಿಲ್, 09: ಇಂದು ಉಳುಮೆ ಮಾಡಲು ನೇಗಿಲು ಬಿಟ್ಟು ಟ್ರ್ಯಾಕ್ಟರ್ಗಳನ್ನು ಹೆಚ್ಚು ಜನರು ಅವಲಂಬಿಸಿದ್ದಾರೆ. ಇವತ್ತಿನ ದಿನಗಳಲ್ಲಿ ಯಾರ ಮನೆಯಲ್ಲೂ ಎತ್ತುಗಳು ಮತ್ತು ಎತ್ತಿನ ಗಾಡಿಗಳು ಇದ್ದಿಯೋ ಅವರು ಯುಗಾದಿ ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡುತ್ತಾರೆ. ಇಂದು ಗಡಿಜಿಲ್ಲೆ ಚಾಮರಾಜನಗರದ ಬಹುಪಾಲು ಹಳ್ಳಿಗಳಲ್ಲಿ ಯುಗಾದಿ ಹಬ್ಬವನ್ನು ಹೊಸ ವರ್ಷದ ಜೊತೆಗೆ ಕೃಷಿ ಚಟುವಟಿಕೆಗಳನ್ನು ಆರಂಭ ಮಾಡುತ್ತಾರೆ. ಈ ಮೂಲಕ 'ಹೊನ್ನೇರು' ಕಟ್ಟುವ ಸಂಪ್ರದಾಯವನ್ನು ಇಂದಿಗೂ ಆಚರಿಸಿಕೊಂಡು ಬರಲಾಗುತ್ತಿದೆ.

ಇಂದು ಕೂಡ ಯುಗಾದಿ ಹಬ್ಬದ ದಿನ ಹೊನ್ನೇರಿನ ಸಂಭ್ರಮ ಜಿಲ್ಲೆಯಾದ್ಯಂತ ಕಾಣಿಸಿಕೊಂಡಿದೆ. ಯುಗಾದಿ ಬಂತೆಂದರೆ ರೈತರ ಕೃಷಿ ಚಟುವಟಿಕೆಗಳಿಗೆ ಜೀವ ಬಂತು ಎಂದೇ ಅರ್ಥ. ಹೀಗಾಗಿಯೇ ಚಾಮರಾಜನಗರ ಜಿಲ್ಲೆಯ ದೊಡ್ಡರಾಯ ಪೇಟೆ, ಹಂಗಳ, ಹೆಬ್ಬಸೂರು, ಜ್ಯೋತಿಗೌಡನಪುರ, ಹೊನ್ನೂರು, ಹನೂರು ತಾಲ್ಲೂಕಿನ ರಾಮಾಪುರ, ಪೊನ್ನಾಚಿ ಮೊದಲಾದ ಗ್ರಾಮಗಳಲ್ಲಿ ಹೊನ್ನೇರು ಕಟ್ಟುವ ಸಂಪ್ರದಾಯ ಇಂದಿಗೂ ಆಚರಿಸಿಕೊಂಡು ಬರಲಾಗುತ್ತಿದೆ.

ಏನಿದು ಹೊನ್ನೇರು?: ಯುಗಾದಿ ಶುರುವಾಗುತ್ತಿದ್ದಂತೆ ಮಳೆ ಬರಲಿದ್ದು, ಕೃಷಿ ಚಟುವಟಿಕೆಗಳು ಆರಂಭವಾಗುತ್ತವೆ. ಎತ್ತುಗಳು ಮತ್ತು ಗಾಡಿಗೆ ಹೊಂಬಾಳೆ ಕಟ್ಟಿ ಪೂಜೆ ಸಲ್ಲಿಸಿ ಗೊಬ್ಬರವನ್ನು ಜಮೀನುಗಳಿಗೆ ಸಿಂಪಡಿಸುವ ಸಂಪ್ರದಾಯಕ್ಕೆ ಹೊನ್ನೇರು ಎಂದು ಕರೆಯುತ್ತಾರೆ. 'ಹೊನ್ನೇರು' ಅನ್ನದಾತರ ಚಿನ್ನದ ತೇರಾಗಿದೆ.

ಚಾಮರಾಜನಗರ ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಈ ಸಂಪ್ರದಾಯವನ್ನು ಇಂದಿಗೂ ಅದ್ಧೂರಿಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ನೂತನ ವರ್ಷದ ಮೊದಲ ದಿನ ರೈತರು ಆ ವರ್ಷದ ಕೃಷಿ ಚಟುವಟಿಕೆ ವಿಧಿವತ್ತಾಗಿ ಅಡಿಯಿಡುವ ಸಂಪ್ರದಾಯ ತಲ-ತಲಾಂತರದಿಂದ ನಡೆದುಕೊಂಡು ಬಂದಿದ್ದು, ಇಂದಿಗೂ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಈ ವಿಶೇಷ ಆಚರಣೆ ಜೀವಂತವಾಗಿದೆ.

ಎತ್ತುಗಳಿಗೆ ಅಲಂಕಾರ: ಹೊನ್ನೇರಿನ ವಿಶೇಷತೆ ಎಂದರೆ ಸೂರ್ಯೋದಯಕ್ಕೂ ಮುನ್ನ ರೈತರು ತಮ್ಮ ಎತ್ತುಗಳನ್ನು ತೊಳೆಯುತ್ತಾರೆ. ಬಳಿಕ ಎತ್ತುಗಳ ಕೊಂಬುಗಳಿಗೆ ಹೊಂಬಾಳೆ, ಕೊರಳಿಗೆ ಬಿಳಿಗಣಗಲೆ ಹೂವು, ಮಂಡೆ ಹುರಿ ಕಟ್ಟಿ ಅಲಂಕರಿಸುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)