ಜನಾಶೀರ್ವಾದ ಸಿಕ್ಕರೆ ಮೇಕೆದಾಟು ಯೋಜನೆಗೆ ಸಹಕಾರ: ಹೆಚ್‌ಡಿ ಕುಮಾರಸ್ವಾಮಿ ಭರವಸೆ

Arun Kumar
0

ಮಂಡ್ಯ ಜಿಲ್ಲೆಯ ಜನರು ತಮಗೆ ಆಶೀರ್ವಾದ ಮಾಡಿದ ಕೆಲವೇ ತಿಂಗಳಲ್ಲಿ ಮೇಕೆದಾಟು ಯೋಜನೆಯನ್ನು ಕಾನೂನಿ ಚೌಕಟ್ಟಿನಲ್ಲಿ ಬಗೆ ಹರಿಸಿ, ಅಣೆಕಟ್ಟೆ ನಿರ್ಮಾಣ ಮಾಡಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಆಶ್ವಾಸನೆ ನೀಡಿದ್ದಾರೆ.

ನಾಗಮಂಗಲದಲ್ಲಿ ಸೋಮವಾರ ಆಯೋಜಿಸಿದ್ದ ಮಂಡ್ಯ ಲೋಕಸಭಾ ಚುನಾವಣೆಯ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಕಾರ್ಯಕರ್ತರ ಬೃಹತ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ರೈತರಿಗೆ ನಾನು ನನ್ನ ರಾಜಕೀಯ ಜೀನವದಲ್ಲಿ ಅಲ್ಪ ಸ್ವಲ್ಪ ಕಾಣಿಕೆ ಕೊಟ್ಟಿದ್ದೇನೆ ಎನ್ನುವುದು ನಿಮ್ಮ ಹೃದಯದಲ್ಲಿದ್ದರೆ ಈ ಚುನಾವಣೆಯಲ್ಲಿ ನನಗೆ ಹಾಲನ್ನಾದರೂ ಕೊಡಿ ವಿಷವನ್ನಾದರೂ ಕೊಡಿ ಎರಡನ್ನೂ ಸಮಚಿತ್ತವಾಗಿ ಸ್ವೀಕರಿಸುತ್ತೇನೆ ಎಂದರು.

ಮೇಕೆದಾಟು ಬಳಿ ಅಣೆಕಟ್ಟೆ ನಿರ್ಮಾಣದ ವಿಷಯ ಇವತ್ತಿನದಲ್ಲ. ಸುಮಾರು 30 ವರ್ಷಗಳಷ್ಟು ಹಳೆಯದು, ತಾವು ಮುಖ್ಯಮಂತ್ರಿಯಾಗಿದ್ದಾಗ ಯೋಜನೆ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಬಳಿ ಮಾತನಾಡಿದ್ದೆ, ಜತೆಗೆ ಡಿಪಿಆರ್ ಮಾಡಿಸಿದ್ದೆ, ಆ ಕಡತ ದೆಹಲಿಯಲ್ಲಿಯೇ ಇದೆ. ತಮ್ಮನ್ನು ಹಾಗೂ ರಾಜ್ಯದ 28 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ ಮೇಕೆದಾಟು ಯೋಜನೆಯನ್ನು ಕಾನೂನಿನ ಚೌಕಟ್ಟಿನಲ್ಲಿಯೇ ಬಗೆ ಹರಿಸಲಾಗುವುದು ಎಂದು ಭರವಸೆ ನೀಡಿದರು.

ಕಾಂಗ್ರೆಸ್ ವಿರುದ್ಧ ಟೀಕೆ
ಮೇಕೆದಾಟು ಯೋಜನೆ ಬಗ್ಗೆ ವೀರಾವೇಶದ ಮಾತುಗಳನ್ನಾಡುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಪಕ್ಕದ ರಾಜ್ಯದ ಸ್ನೇಹಿತರು ಹಾಗೂ ಡಿಎಂಕೆ ಪಕ್ಷದ ನಾಯಕ ಸ್ಟಾಲಿನ್ ಬಳಿ ಮೇಕೆದಾಟು ಯೋಜನೆಗೆ ಒಪ್ಪಿಗೆ ಪಡೆದುಕೊಂಡು ಬರಲಿ, ನಾನು ಪ್ರಧಾನಿ ಬಳಿ ಎರಡು ಸೆಕೆಂಡ್ಗಳಲ್ಲಿ ಅನುಮತಿ ಕೊಡಿಸುತ್ತೇನೆ, ಇದು ಇವರ ಕೈಯಲ್ಲಿ ಆಗುತ್ತಾ ಎಂದು ಸವಾಲೆಸೆದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)