ಹನೂರು: ಇಂಡಿಗನತ್ತದಲ್ಲಿ ಮರು ಮತದಾನ: ಚುನಾವಣಾ ಆಯೋಗ ಘೋಷಣೆ

Arun Kumar
0

ಚಾಮರಾಜನಗರ, ಏಪ್ರಿಲ್, 27: ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದ್ದು, ಇನ್ನು ಈ ವೇಳೆ ಚಾಮರಾಜನಗರ ಕ್ಷೇತ್ರಕ್ಕೆ ಒಳಪಡುವ ಇಂಡಿಗನತ್ತ ಗ್ರಾಮದಲ್ಲಿ ಜನರು ಮತಗಟ್ಟೆಯನ್ನು ಧ್ವಂಸ ಮಾಡಿದ ಘಟನೆ ನಡೆದಿತ್ತು. ಈ ಸಂಬಂಧ ಚುನಾವಣಾ ಆಯೋಗ ಮಹತ್ವದ ನಿರ್ಧಾರಕ್ಕೆ ಬಂದಿದೆ. ಹಾಗಾದರೆ ಮಾಹಿತಿ ಇಲ್ಲಿದೆ ಗಮನಿಸಿ.

ಶುಕ್ರವಾರ (ಏಪ್ರಿಲ್ 27) ಮತದಾನ ಬಹಿಷ್ಕಾರ ನಡೆಸಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಮತಗಟ್ಟೆ ಧ್ವಂಸ ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಮರು ಚುನಾವಣೆ ಮಾಡುವುದಾಗಿ ಘೋಷಣೆ ಮಾಡಿದೆ. ಏಪ್ರಿಲ್ 29ರ ಸೋಮವಾರದಂದು ಬೆಳಗ್ಗೆ 7ರಿಂದ ಸಂಜೆವರೆಗೆ 146ರ ಮತಗಟ್ಟೆಯಲ್ಲಿ ಮರು ಚುನಾವಣೆ ನಡೆಸಲಾಗುತ್ತದೆ ಎಂದು ಚುನಾವಣಾ ಆಯೋಗ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದೆ.

ಶುಕ್ರವಾರದಂದು ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಮತದಾನಕ್ಕೆ ಅಡ್ಡಿಪಡಿಸಿ, ಮತಯಂತ್ರಗಳನ್ನು ಕೆಲವರು ಹಾನಿ ಮಾಡಿದ್ದರು. ಈ ಸಂಬಂಧ, ಹನೂರು ತಹಶಿಲ್ದಾರ್ ಹಾಗೂ ಚುನಾವಣಾ ಅಧಿಕಾರಿ ಪ್ರತ್ಯೇಕ ದೂರು ಕೊಟ್ಟಿದ್ದರು.

ಇನ್ನು ಮಲೆಮಹದೇಶ್ವರ ಬೆಟ್ಟ ಪೊಲೀಸರು 25ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದಾರೆ. ಹಲವರು ಗ್ರಾಮ ತೊರೆದು ಪರಾರಿಯಾಗಿದ್ದಾರೆ. ಮೆಂದಾರೆ ಗ್ರಾಮಕ್ಕೆ ಪೊಲೀಸರು ತೆರಳಿ ಮತದಾನ ಮಾಡುವಂತೆ ಇಂದು ಧೈರ್ಯ ತುಂಬಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)