ಕಾಂಗ್ರೆಸ್ ನೇತೃತ್ವದ ಒಕ್ಕೂಟಕ್ಕೆ ನಾಯಕನೇ ಇಲ್ಲ: ಪ್ರಧಾನಿ ಮೋದಿ!

Arun Kumar
0

ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಒಕ್ಕೂಟಕ್ಕೆ ದೂರದೃಷ್ಟಿ ಇಲ್ಲ ಹಾಗೂ ನಾಯಕ ಕೂಡ ಇಲ್ಲ ಎಂದಿದ್ದಾರೆ ಪ್ರಧಾನಿ ನರೇಂದ್ರ ಮೋದಿ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿ ಮತದಾರರು ಹಾಗೂ ಬೆಂಗಳೂರು ವ್ಯಾಪ್ತಿ ಮತದಾರರನ್ನ ಉದ್ದೇಶಿಸಿ ಇಂದು ಮಾತನಾಡಿದ ಪ್ರಧಾನಿ ಮೋದಿ ಅವರು ಕಾಂಗ್ರೆಸ್ & ವಿರೋಧ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಬಳ್ಳಾಪುರದ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಹಾಗೂ ಬೆಂಗಳೂರು & ಕೋಲಾರ ಕ್ಷೇತ್ರಗಳ ಬಿಜೆಪಿ & ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರವಾಗಿ, ಪ್ರಧಾನಿ ಮೋದಿ ಅವರಿಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾತನಾಡಿದರು. ಇದೇ ವೇಳೆ ವಿರೋಧ ಪಕ್ಷಗಳಿಗೆ ಯಾವುದೇ ದೂರ ದೃಷ್ಟಿ ಇಲ್ಲ. ಹಾಗೇ ಅವರಿಗೆ ಉತ್ತಮವಾದ ನಾಯಕನೇ ಇಲ್ಲವೆಂದರು ಪ್ರಧಾನಿ ಮೋದಿ ಅವರು. ಮತ್ತೊಂದು ಕಡೆ ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಒಕ್ಕೂಟದ ವಿರುದ್ಧ ಇನ್ನೊಂದು ಗಂಭೀರ ಆರೋಪವನ್ನೂ ಪ್ರಧಾನಿ ಮೋದಿ ಮಾಡಿದರು.

ಹಗರಣಗಳನ್ನು ಹೊತ್ತು ತಂದಿದ್ದಾರೆ!
ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಒಕ್ಕೂಟದಲ್ಲಿ ಇರುವ ಪಕ್ಷಗಳು ಸಾಲು ಸಾಲು ಹಗರಣ & ಆರೋಪಗಳನ್ನ ಹೊತ್ತು ಬಂದಿವೆ. ಹೀಗಾಗಿ ಅವರಿಂದ ದೇಶದ ಅಭಿವೃದ್ಧಿ ಅಸಾಧ್ಯವಾಗಿದೆ. ಈಗಾಗಲೇ ಭಾರತೀಯ ಮತದಾರರು ಮೋದಿ ಅವರನ್ನು ಗೆಲ್ಲಿಸಬೇಕು ಎಂದು ನಿರ್ಧರಿಸಿದ್ದು, ಎನ್ಡಿಎ ಒಕ್ಕೂಟ ಹ್ಯಾಟ್ರಿಕ್ ಗೆಲುವು ಪಡೆಯುವುದು ಗ್ಯಾರಂಟಿ. ವಿರೋಧ ಪಕ್ಷದ ಎಲ್ಲಾ ಪ್ರಯತ್ನಗಳು ಹುಸಿಯಾಗಲಿವೆ, ಮತದಾರರು ಬಿಜೆಪಿ ಮತ್ತು ಎನ್ಡಿಎ ಪರವಾಗಿ ಇದ್ದಾರೆ ಅನ್ನೋದಕ್ಕೆ ಇಲ್ಲಿ ನೆರೆದಿರುವ ಜನಸಮೂಹವೇ ಸಾಕ್ಷಿ ಎಂದರು. ಈ ಮೂಲಕ ಕಾಂಗ್ರೆಸ್ ಮತ್ತು ಕಾಂಗ್ರೆಸ್ ನೇತೃತ್ವದ ಪಕ್ಷಗಳ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ರು ಪ್ರಧಾನಿ ಮೋದಿ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)