ಪ್ರಧಾನಿ ಅಭ್ಯರ್ಥಿ ಮಲ್ಲಿಕಾರ್ಜುನ್ ಖರ್ಗೆ ಎನ್ನಲು ಇವರಿಗೆ ಹೆದರಿಕೆ: ಪ್ರಹ್ಲಾದ್ ಜೋಶಿ

Arun Kumar
0

ಹುಬ್ಬಳ್ಳಿ, ಏಪ್ರಿಲ್ 09: ಕಾಂಗ್ರೆಸ್ನ ರಾಹುಲ್ ಗಾಂಧಿ ಬಳಿಯೇ ಕಾಂಗ್ರೆಸ್ ನಾಯಕರು ಮಾತನಾಡುವುದಿಲ್ಲ. ಮುಖ್ಯಮಂತ್ರಿ ಪದವಿ ಹೋಗಿ ಬಿಡುತ್ತದೆ ಎಂಬ ಭಯಕ್ಕೆ ಸಿದ್ದರಾಮಯ್ಯ ಮಾತನಾಡುತ್ತಿಲ್ಲ. ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಹೇಳಲು ಸಿದ್ಧರಾಮಯ್ಯ ಹೆದರುತ್ತಾರೆ ಎಂದು ಧಾರವಾಡ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಅವರು ಸಿದ್ದರಾಮಯ್ಯಗೆ ಅವರಿಗೆ ತಿರುಗೇಟು ಕೊಟ್ಟಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಎಲ್ಲ ಸಂಸದರ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಅವರು ಟಾಂಗ್ ಕೊಟ್ಟರು. ಅಭಿವೃದ್ದಿ ಹಾಗೂ ಬರ ಪರಿಹಾರದ ವಿಚಾರವಾಗಿ ಈವರೆಗೂ ಯಾವುದೇ ವರದಿ ನೀಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಬಹಿರಂಗ ಚರ್ಚೆಯ ಮೂಲಕ ಈಗಾಗಲೇ ಕಾಂಗ್ರೆಸ್ ನವರಿಗೆ ಉತ್ತರ ನೀಡಲಾಗಿದೆ ಎಂದರು.

ವಿಧಾನಸಭೆಯ ಗುಂಗಿನಿಂದ ಸಿಎಂ ಹೊರ ಬಂದಿಲ್ಲ
ಸಿಎಂ ಸಿದ್ಧರಾಮಯ್ಯ ಅವರು ವಿಧಾನಸಭೆಯ ಮೂಡ್ ನಿಂದ ಇನ್ನೂ ಹೊರ ಬಂದಿಲ್ಲ. ಅವರಿನ್ನು ವಿಧಾನಸಭೆ ಚುನಾವಣೆಯ ಮೂಡಿನಲ್ಲಿಯೇ ಇದ್ದಾರೆ. ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯ ಮಾತನಾಡುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ವಿಕಸಿತ ಭಾರತದ ಬಗ್ಗೆ ಮಾತನಾಡುತ್ತಾರೆ. ಸಿದ್ದರಾಮಯ್ಯ ಅವರು ಯಾವುದೋ ಒಂದು ರಾಜಕಾರಣದ ವಿಷಯ ಇಟ್ಟುಕೊಂಡು ಮಾತನಾಡುತ್ತಾರೆ ಎಂದು ದೂರಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)