ತಮ್ಮ ಕುಟುಂಬದ ಹಿತಾಸಕ್ತಿಗಾಗಿ ದೇವೇಗೌಡರು ಮೋದಿಯನ್ನು ಹೊಗಳುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

Arun Kumar
0

ಅರಸೀಕೆರೆ : ಶ್ರೇಯಸ್ ಪಟೇಲ್ ಅವರನ್ನು ಹಾಸನ ಲೋಕಸಭಾ ಕ್ಷೇತ್ರದಿಂದ ಗೆಲ್ಲಿಸಿಕೊಂಡು ಬನ್ನಿ. ಶಾಸಕ ಶಿವಲಿಂಗೇಗೌಡರನ್ನು ಮಂತ್ರಿ ಮಾಡುವ ಜವಾಬ್ದಾರಿ ನನಗೆ ಬಿಡಿ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಶ್ರೇಯಸ್ ಪಟೇಲ್ ಗೆಲುವಿಗೆ ಅರಸೀಕೆರೆಯಲ್ಲಿ ನಡೆಸಿದ ಬೃಹತ್ ರೋಡ್ ಶೋ ವೇಳೆ ಈ ಘೋಷಣೆ ಮಾಡಿದರು.

ದೇವೇಗೌಡರು ತಮ್ಮ ಕುಟುಂಬದ ರಾಜಕೀಯ ಹಿತಾಸಕ್ತಿಗಾಗಿ ಮೋದಿಯವರನ್ನು ಹಿಗ್ಗಾ ಮುಗ್ಗಾ ಹೊಗಳುತ್ತಿದ್ದಾರೆ. ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೀನಿ ಎಂದಿದ್ದ ದೇವೇಗೌಡರೇ, ಈಗ ಮೋದಿಯವರು ರಾಜ್ಯದ ಜನತೆಯ ಕೈಗೆ ನೀಡಿದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ಹೊಗಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ದೇವೇಗೌಡರ ಅಳಿಯ ಬೆಂಗಳೂರು ಗ್ರಾಮಾಂತರದಲ್ಲಿ, ಮಗ ಮಂಡ್ಯದಲ್ಲಿ, ಮೊಮ್ಮಗ ಹಾಸನದಲ್ಲಿ ಸ್ಪರ್ಧಿಸಿದ್ದಾರೆ. ಇವರಿಗೆ ತಮ್ಮ ಕುಟುಂಬದ ಆಚೆ ಅಭ್ಯರ್ಥಿಗಳೇ ಕಾಣುತ್ತಿಲ್ಲ. ಹೀಗಾಗಿ ಈ ಬಾರಿ ಪ್ರಜ್ವಲ್ ರೇವಣ್ಣ ಅವರನ್ನು ಮನೆಗೆ ಕಳುಹಿಸಿ ಶ್ರೇಯಸ್ ಪಟೇಲ್ ಅವರನ್ನು ಗೆಲ್ಲಿಸಿಕೊಂಡು ಬನ್ನಿ ಎಂದು ಕರೆ ನೀಡಿದರು.

ರಾಜ್ಯದಲ್ಲಿ ಅತಿ ಹೆಚ್ಚು ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ ಮುಗಿಸಿದ ಶ್ರೇಯಸ್ಸು ದೇವೇಗೌಡರದ್ದಾಗಿದೆ. ಅರಸೀಕೆರೆ ಶಿವಲಿಂಗೇಗೌಡರು ಕಾಂಗ್ರೆಸ್ ಸೇರಿ ಬಚಾವಾದರು ಎಂದರು.

ಶಿವಲಿಂಗೇಗೌಡರು ಕ್ಷೇತ್ರದ ಅಭಿವೃದ್ದಿಗೆ ಕೇಳುವ ಎಲ್ಲಾ ಕೆಲಸಗಳಿಗೆ ಸಹಿ ಹಾಕಲು ನಾನು ಸಿದ್ದನಿದ್ದೇನೆ. ಶಿವಲಿಂಗೇಗೌಡರನ್ನು ಮಂತ್ರಿ ಮಾಡುವ ಜವಾಬ್ದಾರಿಯನ್ನೂ ನನಗೆ ಬಿಡಿ, ಇದಕ್ಕಾಗಿ ಶ್ರೇಯಸ್ ಪಟೇಲ್ ಅವರನ್ನು ಭರ್ಜರಿ ಬಹುಮತದಿಂದ ಗೆಲ್ಲಿಸಿಕೊಂಡು ಬನ್ನಿ ಎಂದು ಕರೆ ನೀಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)