BWSSB: ಈವರೆಗೆ 4000 ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆ: ಅಪ್ಡೇಟ್ ಕೊಟ್ಟ ಜಲಮಂಡಳಿ

Arun Kumar
0

ಬೆಂಗಳೂರು, ಏಪ್ರಿಲ್ 04: ಬೆಂಗಳೂರಲ್ಲಿ ನೀರು ಪೂರೈಕೆಯಲ್ಲಿ ಕೊರತೆ ಸಮಸ್ಯೆ ಆಗಿದೆ. ಬೇಸಿಗೆ ಕಾರಣ ಅಂತರ್ಜಲ ಕುಸಿದಿದ್ದು, ನೀರಿನ ಮಿತ ಬಳಕೆಗೆ ಜಲಮಂಡಳಿ ಆದ್ಯತೆ ನೀಡಿದೆ. ಇದರ ಭಾಗವಾಗಿ ಹೆಚ್ಚು ಜನರ ಸೇರುವ ಪ್ರದೇಶಗಳಲ್ಲಿ ನಲ್ಲಿಗಳಿಗೆ ಮೀತ ನೀರಿನ ಬಳಕೆಗೆ ಆಸರೆಯಾಗುವ ಏರಿಯೇಟರ್ ಅಳವಡಿಕೆ ಕಾರ್ಯ ಮತ್ತಷ್ಟು ಚುರುಕು ಪಡೆದಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಯು ಈವರೆಗೆ 4000 ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆ ಮಾಡಿದ್ದಾರೆ. ಸಾರ್ವಜನಿಕರು ಹೆಚ್ಚಾಗಿ ಭೇಟಿ ನೀಡುವಂತಹ ಸರ್ಕಾರಿ ಕಚೇರಿಗಳು ಹಾಗೂ ನಗರದ ಪ್ರಮುಖ ಸಂಸ್ಥೆಗಳಲ್ಲಿನ ನಲ್ಲಿಗಳಿಗೆ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಏರಿಯೇಟರ್ ಅಳವಡಿಸುವ ಕಾರ್ಯ ನಡೆಯುತ್ತಿದೆ.

ಸಾರ್ವಜನಿಕ ಸ್ಥಳಗಳ ನಲ್ಲಿಗಳಿಗೆ ಅಳವಡಿಕೆ
ಈ ಕುರಿತು ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಅವರು, ಮಾಲ್ಗಳಲ್ಲಿ, ವಾಣಿಜ್ಯ ಸಂಕೀರ್ಣಗಳಲ್ಲಿ, ಅಪಾರ್ಟ್ಮೆಂಟ್ಗಳಲ್ಲಿ, ಸರಕಾರಿ ಕಟ್ಟಡಗಳಲ್ಲಿ, ಐಷಾರಾಮಿ ಹೋಟೇಲ್ಗಳಲ್ಲಿ, ರೆಸ್ಟೋರೆಂಟ್ಗಳಲ್ಲಿ ಹಾಗೂ ಧಾರ್ಮಿಕ ಸ್ಥಳಗಳನ್ನು ಒಳಗೊಂಡಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಸ್ವಚ್ಚತೆಗಾಗಿ ಬಳಸುವ ನಲ್ಲಿಗಳಲ್ಲಿ ಕಡ್ಡಾಯವಾಗಿ ಪ್ಲೋ ರಿಸ್ಟ್ರಿಕ್ಟರ್/ಏರಿಯೇಟರ್ ಅಳವಡಿಸುವುದನ್ನ ಕಡ್ಡಾಯಗೊಳಿಸಿದ್ದೇವೆ. ಈ ಸಂಬಂಧ ಸುತ್ತೋಲೆ ಹೊರಡಿಸಿದೆ ಎಂದು ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)