Lok Sabha Election: ದಾವಣಗೆರೆಯಲ್ಲಿ ಹಳೆಯ ರಾಜಕೀಯ ಕುಟುಂಬಗಳ ಮಹಿಳಾ ಮಣಿಗಳ ಸ್ಪರ್ಧೆ: ಕುತೂಹಲ ಹೆಚ್ಚಿಸಿದೆ ಸ್ಪರ್ಧೆ

Arun Kumar
0

ಕರ್ನಾಟಕ ಲೋಕಸಭಾ ಚುನಾಣೆಯಲ್ಲಿ ಹಲವು ಕ್ಷೇತ್ರಗಳು ಮತದಾರರ ಚಿತ್ತ ಕದ್ದಿವೆ. ಅದರಲ್ಲಿ ದಾವರಣಗೆರೆ ಲೋಕಸಭಾ ಕ್ಷೇತ್ರ ಸಹ ಒಂದು. ಈ ಕ್ಷೇತ್ರದಲ್ಲಿ ಎರಡು ಹಳೆಯ ರಾಜಕೀಯ ಕುಟುಂಬಗಳ ಹೊಸ ಮುಖಗಳ ನಡುವೆ ಸ್ಪರ್ಧೆ ನಡೆಯಲಿದೆ. ಹೀಗಾಗಿ ಬಹಳ ಕುತೂಹಲ ಮೂಡಿಸಿದೆ. ಈ ಕ್ಷೇತ್ರದಲ್ಲಿ ಸತತ ಆರು ಬಾರಿ ಡಾ.ಜಿಎಂ ಸಿದ್ಧೇಶ್ವರ್ ಸಂಸದರಾಗಿ ಆಯ್ಕೆ ಆಗಿದ್ದಾರೆ. 1999ರಿಂದ ಇವರು ಸತತ ಡಬಲ್ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮಣೆ ಹಾಕಿದರೆ, ಬಿಜೆಪಿ ಹಾಲಿ ಸಂಸದ ಡಾ.ಜಿಎಂ ಸಿದ್ಧೇಶ್ವರ್ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್ ಅವರಿಗೆ ಅವಕಾಶ ನೀಡಿದೆ. ದಾವಣಗರೆಯಲ್ಲಿ ಮೇ 7ರಂದು ಚುನಾವಣೆಗಳು ನಡೆಯಲಿದ್ದು, ಪ್ರಚಾರದ ಭರಾಟೆ ಜೋರಾಗಿದೆ. ಉಭಯ ಅಭ್ಯರ್ಥಿಗಳು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ.

ಅಂದು ಕರ್ನಾಟಕದ ಕೈಗಾರಿಕಾ ಹಬ್ ಮತ್ತು ಮ್ಯಾಂಚೆಸ್ಟರ್ ಎಂದು ಕರೆಯಲಾಗುತ್ತಿದ್ದ ಕ್ಷೇತ್ರದಲ್ಲಿ ಆಂಜನೇಯ ಕಾಟನ್ ಮಿಲ್ ಸೇರಿದಂತೆ ಜಿಲ್ಲೆಯ ಬಹುತೇಕ ಕೈಗಾರಿಕೆಗಳು ಇಲ್ಲಿನ ಮುಚ್ಚಿರುವುದರಿಂದ ಉದ್ಯೋಗ ಅರಸಿ ಇಲ್ಲಿನ ಜನರು ಬೇರೆ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ.

ದಾವಣಗೆರೆಗೆ ಏನು ಬೇಕು?
ಮತದಾರ ತಮ್ಮ ಸಂಸದರಿಂದ ವಿಮಾನ ನಿಲ್ದಾಣ, ಸಾಫ್ಟ್ವೇರ್ ಪಾರ್ಕ್, ವಿಶೇಷ ಆರ್ಥಿಕ ವಲಯಗಳನ್ನು ರಚಿಸುವುದು, ಆರೋಗ್ಯ ಸೌಲಭ್ಯಗಳನ್ನು ಸುಧಾರಿಸುವುದು ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕಾದ ಅನಿವಾರ್ಯತೆ ಇದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)