RCB Vs RR: ಪ್ರಮುಖ ಆಟಗಾರನನ್ನೇ ಕೈಬಿಟ್ಟ ಆರ್‌ಸಿಬಿ; ಫ್ಯಾನ್ಸ್ ಆಕ್ರೋಶ

Arun Kumar
0

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮ್ಯಾನೇಜ್ಮೆಂಟ್ನ ರಾಕೆಟ್ ಸೈನ್ಸ್ ಅಭಿಮಾನಿಗಳಿಗೆ ಅರ್ಥವಾಗುತ್ತಿಲ್ಲ. ತಂಡದಲ್ಲಿ ರನ್ ಗಳಿಸದ, ಪದೇ ಪದೇ ವಿಫಲವಾಗುತ್ತಿರುವ ಆಟಗಾರರನ್ನು ಕೈಬಿಟ್ಟು ಬೇರೆ ಆಟಗಾರರಿಗೆ ಅವಕಾಶ ಕೊಡುವುದು ಸಾಮಾನ್ಯ, ಆದರೆ ಅವಕಾಶ ಸಿಕ್ಕಾಗೆಲ್ಲಾ ಚನ್ನಾಗಿ ಆಡಿದರೂ ತಂಡದಿಂದ ಕೈಬಿಟ್ಟರೆ ಅದಕ್ಕೆ ಏನು ಹೇಳುವುದು?

ಜೈಪುರದ ಸವಾನ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಯಿಂಗ್ ಇಲೆವೆನ್ನಲ್ಲಿ ಮಹಿಪಾಲ್ ಲೊಮ್ರೋರ್ ಅವರನ್ನೇ ಕೈಬಿಟ್ಟಿದ್ದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಸತತ ಮೂರು ಪಂದ್ಯಗಳನ್ನು ಗೆದ್ದಿರುವ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡದೆ ಕಣಕ್ಕಿಳಿಯಲು ನಿರ್ಧರಿಸಿತು.

ಲೋಮ್ರೋರ್, ವೈಶಾಖ್ ಇಲ್ಲ
ಸತತ ಎರಡು ಪಂದ್ಯಗಳನ್ನು ಸೋತ ಬಳಿಕ ಆರ್ಸಿಬಿ ತಂಡದಲ್ಲಿ ಹಲವು ಬದಲಾವಣೆ ನಿರೀಕ್ಷೆ ಮಾಡಲಾಗಿತ್ತು. ವಿಲ್ ಜ್ಯಾಕ್ಸ್, ಲಾಕಿ ಫರ್ಗ್ಯುಸನ್ ಇಬ್ಬರಲ್ಲಿ ಒಬ್ಬರಾದರೂ ತಂಡದಲ್ಲಿ ಅವಕಾಶ ಪಡೆಯುತ್ತಾರೆ ಎಂದು ನಿರೀಕ್ಷೆ ಮಾಡಿದ್ದರು. ಆದರೆ ನೀವು ಅಂದುಕೊಂಡಂತೆ ನಾವಲ್ಲ ಎಂದು ಆರ್ಸಿಬಿ ಮ್ಯಾನೇಜ್ಮೆಂಟ್ ಮತ್ತೆ ಸಾಬೀತುಮಾಡಿದೆ.
Tags

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)