Shivamogga: ಗೀತಾ ಶಿವರಾಜ್‌ಕುಮಾರ್ ನಾಮಪತ್ರ ಸಲ್ಲಿಕೆ ವೇಳೆ ಅವಘಡ, ನಾಲ್ವರಿಗೆ ಗಾಯ

Arun Kumar
0

ಶಿವಮೊಗ್ಗ, ಏಪ್ರಿಲ್ 15: ದೊಡ್ಮನೆ ಸೊಸೆ, ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ಕುಮಾರ್ ಈ ಬಾರಿ ಲೋಕಸಭಾ ಚುನಾವಣೆ ಅಖಾಡದಲ್ಲಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೀತಾ ಶಿವರಾಜ್ಕುಮಾರ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಲಾಗಿದ್ದು, ಈಗಾಗಲೇ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಶತಾಯಗತಾಯ ಈ ಬಾರಿ ಚುನಾವಣೆಯಲ್ಲಿ ಗೆಲ್ಲುವ ಹಠಕ್ಕೆ ಬಿದ್ದಿರುವ ಅವರು ಇಂದು ಸಾವಿರಾರು ಜನ ಬೆಂಬಲಿಗರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಗೀತಾ ಶಿವರಾಜ್ಕುಮಾರ್ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಅವಘಡ ಸಂಭವಿಸಿದೆ. ಸಾವಿರಾರು ಜನರು ಸೇರಿದದ್ದ ಕಾಂಗ್ರೆಸ್ ಮೆರವಣಿಗೆ ವೇಳೆ ಎಲ್ಇಡಿ ಡಿಸ್ಪ್ಲೇ ಬೋರ್ಡ್ ಕುಸಿದು ಬಿದ್ದಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ ನಗರದ ಗಾಂಧಿ ಬಜಾರ್ನಲ್ಲಿ ಗೀತಾ ಶಿವರಾಜ್ಕುಮಾರ್ ನೇತೃತ್ವದ ಕಾಂಗ್ರೆಸ್ ಮೆರವಣಿಗೆ ಸಾಗುತ್ತಿದ್ದ ವೇಳೆ ಬೃಹತ್ ಗಾತ್ರದ ಗಾತ್ರದ ಎಲ್ಇಡಿ ಡಿಸ್ಪ್ಲೇ ಬೋರ್ಡ್ ಏಕಾಏಕಿ ಕುಸಿದು ಬಿದ್ದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)