V. Srinivas Prasad: ಹಾಲಿ ಸಂಸದರ ಸ್ಥಿತಿ ಗಂಭೀರ: ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ

Arun Kumar
0

ಬೆಂಗಳೂರು, ಏಪ್ರಿಲ್ 27: ಚಾಮಜರಾಜನಗರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಬಿಜೆಪಿ ಹಿರಿಯ ರಾಜಕಾರಣಿ ವಿ. ಶ್ರೀನಿವಾಸ ಪ್ರಸಾದ್ (V. Srinivas Prasad) ಅವರು ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

6 ವರ್ಷದ ಹಿರಿಯ ರಾಜಕಾರಣಿ ವಿ.ಶ್ರೀನಿವಾಸ್ ಪ್ರಸಾದ್ ಅವರು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಾರೆ. ಈ ಕಾರಣದಿಂದಾಗಿ ಅವರನ್ನು ಶನಿವಾರ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ಎಂದು ಮೂಲಗಳು ತಿಳಿಸಿವೆ.

ನೆನ್ನೆ ಶುಕ್ರವಾರ ವಷ್ಟೇ ಚಾಮರಾಜನಗರ ಲೋಕಸಭೆ ಚುನಾವಣೆ ನಡೆದಿದೆ. ಈ ಭಾರಿ ಬಿಜೆಪಿ ಬಾಲರಾಜ್ ಅವರು ಕಣಕ್ಕಿಳಿದಿದ್ದರು. ಬಹು ಅಂಗಾಂಗ ವೈಫಲ್, ವಯೋಸಹಜ ಕಾಲೆಯಿಂದ ಬಳಲುತ್ತಿದ್ದ ಹಾಲಿ ಸಂಸದರ ಆರೋಗ್ಯದಲ್ಲಿ ಶನಿವಾರ ಬಹಳಷ್ಟು ಏರುಪೇರು ಉಂಟಾಗಿದೆ.

ಅವರ ಬ್ಲೆಡ್ ಪ್ರಷರ್, ಶುಗರ್ ಪ್ರಮಾಣದಲ್ಲಿ ಏರಿಳಿತ ಉಂಟಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಅವರನ್ನು ತುರ್ತು ಆರೈಕೆ ಕೇಂದ್ರದಲ್ಲಿಟ್ಟು ತಜ್ಞ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)