ಗ್ಯಾರೆಂಟಿ ಯೋಜನೆಯಿಂದ ಮಲೆ ಮಹದೇಶ್ವರ ದೇಗುಲಕ್ಕೆ ₹3 ಕೋಟಿ ಹಣ ಬಂದಿದೆ: ಡಿಕೆ ಶಿವಕುಮಾರ್

Arun Kumar
0

ಹುಬ್ಬಳ್ಳಿ, ಮೇ 04: ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ಮಹಿಳೆಯರಿಗಾಗಿ, ಜನರ ಅಭಿವೃದ್ಧಿಗಾಗಿ ಐದು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಖಾತರಿ ಯೋಜನೆಗಳಿಂದಾಗಿ ಜನರು ನಮ್ಮ ಪರ ಹರಕೆ ಕಟ್ಟಿಕೊಳ್ಳುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಎರಡನೇ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದ ಪೊಲೀಸ್ ಠಾಣೆ ಸಮೀಪ ಕಾಂಗ್ರೆಸ್ನಿಂದ ಬಹಿರಂಗ ಸಮಾವೇಶ ನಡೆಯಿತು. ಕಾರ್ಯಕ್ರಮದ ನೇತೃತ್ವವನ್ನು ಡಿಸಿಎಂ ಹಾಗೂ ಶಾಸಕ ಯತೀಂದ್ರ ಸಿದ್ದರಾಮಯ್ಯ ವಹಿಸಿದ್ದರು.

ಈ ವೇಳೆ ಮಾಗತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಗ್ಯಾರೆಂಟಿ ಯೋಜನೆಗಳಿಂದ ಜನರು, ಮಹಿಳೆಯರು ದೇವರಲ್ಲಿ ಹರಕೆ ಕಟ್ಟುತ್ತಿದ್ದಾರೆ. ಉಪಮುಖ್ಯಮಂತ್ರಿಗಳಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದಾರೆ.

ನಮ್ಮ ಗ್ಯಾರೆಂಟಿ ಯೋಜನೆಗಳಿಂದಲೇ ಚಾಮರಾಜನಗರದ ಮಲೆ ಮಹಾದೇಶ್ವರ ದೇವಸ್ಥಾನಕ್ಕೆ ಹೋಗಿರುವ ಭಕ್ತರು ನಮ್ಮ ಪರ ಬೇಡಿಕೊಂಡಿದ್ದಾರೆ. ಹತ್ತು ರೂಪಾಯಿ ಜಾಸ್ತಿ ಹಾಕುತ್ತಿದ್ದಾರೆ. ನಮ್ಮ ಗ್ಯಾರೆಂಟಿಯಿಂದ ಮಲೆ ಮಹಾದೇಶ್ವರದಲ್ಲಿ ಮೂರು ಕೋಟಿ ರೂಪಾಯಿ ಹಣ ಬಂದಿದೆ ಎಂದು ಅವರು ತಿಳಿಸಿದರು.

ವಿನೋದ್ ಅಸೂಟಿ ಸಿಎಸ್ ಶಿವಳ್ಳಿ ತದ್ರೂಪಿ
ಶಿರಹಟ್ಟಿ ಶ್ರೀ ಫಕೀರ ದಿಂಗಾಲೇಶ್ವರಿ ಶ್ರೀಗಳಿಗೆ ನಮಸ್ಕಾರ ತಿಳಿಸಿದ ಡಿಸಿಎಂ, ಶ್ರೀಗಳು ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಚಾರ ಮಾಡುತ್ತಿದ್ದಾರೆ ಎಂದರು.

ಸದ್ಯ ಕಾಂಗ್ರೆಸ್ನಿಂದ ಧಾರವಾಡಕ್ಕೆ ಕಣಕ್ಕಿಳಿಸಿರುವ ನಮ್ಮ ಅಭ್ಯರ್ಥಿ 'ವಿನೋದ್ ಅಸೂಟಿ' (Vinod Asooti) ಯವರು ಮಾಜಿ ಸಚಿವ ಸಿ.ಎಸ್. ಶಿವಳ್ಳಿ ಅವರ ತದ್ರೂಪಿಯಾಗಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)