ಪ್ರಧಾನಿ ಮೋದಿ ಸಾವು ಬಯಸುವ ಕಾಂಗ್ರೆಸ್‌ನ ನೀಚತನ ಖಂಡನೀಯ: ಬಸವರಾಜ ಬೊಮ್ಮಾಯಿ

Arun Kumar
0

ಹಾವೇರಿ, ಮೇ 02: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಾವು ಬಯಸುವಷ್ಟು ನೀಚಮಟ್ಟಕ್ಕೆ ಕಾಂಗ್ರೆಸ್ ಇಳಿದಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಹಾವೇರಿ ಜಿಲ್ಲೆಯ ತಾಲೂಕಿನ ಕೋಣನತಂಬಿಗಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ಮಧ್ಯೆ ಸುದ್ದಿಗಾರರ ಜೊತೆಗೆ ಮಾತನಾಡಿದರು. ಪ್ರಧಾನಿ ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗಲ್ಲಾ ಎಂಬ ಕಾಂಗ್ರೆಸ್ ಶಾಸಕ ರಾಜು ಕಾಗೇ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಹಾವೇರಿ ಜಿಲ್ಲೆಯ ತಾಲೂಕಿನ ಕೋಣನತಂಬಿಗಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ಮಧ್ಯೆ ಸುದ್ದಿಗಾರರ ಜೊತೆಗೆ ಮಾತನಾಡಿದರು. ಪ್ರಧಾನಿ ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗಲ್ಲಾ ಎಂಬ ಕಾಂಗ್ರೆಸ್ ಶಾಸಕ ರಾಜು ಕಾಗೇ ಹೇಳಿಕೆಗೆ ಪ್ರತಿಕ್ರಿಯಿಸಿದರು.



ಕಾಂಗ್ರೆಸ್ ರಾಜು ಕಾಗೆ ಇಂತಹ ಹೇಳಿಕೆ ಇತ್ತೀಚೆಗೆ ಕೊಡುತ್ತಿದ್ದಾರೆ. ಪ್ರಧಾನ ಮಂತ್ರಿಗಳ ಸಾವನ್ನು ಬಯಸುವ ನೀಚ ಮಟ್ಟಕ್ಕೆ ಕಾಂಗ್ರೆಸ್ ಶಾಸಕರು ಇಳಿದಿದ್ದಾರೆ. ಅಂದರೆ ಇವರ ರಾಜಕೀಯ ಯಾವ ಮಟ್ಟಕ್ಕೆ ಹೋಗುತ್ತಿದೆ ಎಂದು ಪ್ರಶ್ನಿಸಿದರು.

ನೀವು ಟೀಕೆ ಮಾಡಿದಷ್ಟು ಪ್ರಧಾನಿ ದೊಡ್ಡವರಾಗಿದ್ದಾರೆ
ಯಾರೇ ಪ್ರತಿಸ್ಪರ್ದಿ ಇದ್ದರೂ ಸಾವನ್ನು ಬಯಸಬಾರದು. ಕೀಳು ಮಟ್ಟದ ಟೀಕೆ ಮಾಡಿದ್ದಷ್ಟು ಮೋದಿ ದೊಡ್ಡವರಾಗುತ್ತಲೇ ಬಂದಿದ್ದಾರೆ. ಮತ್ತೆ ಮತ್ತೆ ಗೆದ್ದು ಬಂದಿದ್ದಾರೆ. ಮೋದಿಯವರ ಆಯಸ್ಸು ಹೆಚ್ಚಾಗುತ್ತದೆ. ಆರೋಗ್ಯ ಚೆನ್ನಾಗಿ ಆಗುತ್ತದೆ. ಮೋದಿ ಅಲೆ ಸುನಾಮಿಯಾಗಿ ಪರಿವರ್ತನೆ ಆಗಿದೆ. ಮೋದಿ ಅಲೆಯಲ್ಲಿ ಇವರು ಕೊಚ್ಚಿ ಹೋಗುತ್ತಾರೆ ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)