ಹಾಸನ ಪೆನ್‌ಡ್ರೈವ್ ಕೇಸ್: ಸಿಬಿಐ ತನಿಖೆಗೆ ನೀಡುವ ಬಗ್ಗೆ ಜಿ.ಪರಮೇಶ್ವರ ಮಹತ್ವದ ಹೇಳಿಕೆ

Arun Kumar
0

ಬೆಂಗಳೂರು, ಮೇ 08: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಕಲೆಯನ್ನು ಸಿಬಿಐಗೆ ವಹಿಸುವ ಅಗತ್ಯತೆ ಕುರಿತು ಬುಧವಾರ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಮಾತನಾಡಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದವರು. ಎಸ್ಐಟಿ ಯಾವ ರೀತಿ ಕಾರ್ಯನಿರ್ವಹಿಸುತ್ತದೆ ಎಂಬುದು ಅವರಿಗೆ ಗೊತ್ತಿದೆ.

ನಮ್ಮ ಪೊಲೀಸರು ಸಮರ್ಥರಿದ್ದಾರೆ. ತನಿಖೆ ಯಾವ ರೀತಿ ಮುಂದುವರಿದಿದೆ ಎಂಬುದನ್ನು ಜನ ಸಮುದಾಯ ಗಮನಿಸುತ್ತಿದೆ. ಕೆಲವು ರಾಜಕೀಯ ಹೇಳಿಕೆಗಳನ್ನು ಹೊರತುಪಡಿಸಿದರೆ, ತನಿಖೆ ಸರಿಯಾದ ದಾರಿಯಲ್ಲಿ ಹೋಗುತ್ತಿದೆ. ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಗೃಃ ಸಚಿವರ ಸ್ಪಷ್ಟಪಡಿಸಿದರು.

ಜನರು ಸಿಬಿಐ ಗೆ ಕೊಟ್ಟಿದ್ದನ್ನು ಒಪ್ಪಿಲ್ಲ
2008-2013ರವರೆಗೆ ಅಂದಿನ ಸರ್ಕಾರ ಯಾವುದೇ ಒಂದು ಪ್ರಕರಣವನ್ನು ಸಿಬಿಐಗೆ ವಹಿಸಿಲ್ಲ. ಕೆಲವು ಪ್ರಕರಣಗಳಲ್ಲಿ ಸಿಬಿಐ ಕೊಟ್ಟ ವರದಿಯನ್ನು ಜನರು ಒಪ್ಪಿಲ್ಲ. ಅಂತಹ ಪ್ರಕರಣಗಳ ಸಿಬಿಐ ಕಾರ್ಯವೈಖರಿಯನ್ನು ಟೀಕಿಸಿದ್ದನ್ನು ನೋಡಿದ್ದೇವೆ. ಸಿಬಿಐ ಅಂದ ತಕ್ಷಣ ಏನೋ ಆಗಿ ಬಿಡುತ್ತದೆ ಎಂಬ ಪರಿಕಲ್ಪನೆ ಬೇಡ ಎಂದರು.

ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದವರು. ಎಸ್ಐಟಿ ಯಾವ ರೀತಿ ಕಾರ್ಯನಿರ್ವಹಿಸುತ್ತದೆ ಎಂಬುದು ಅವರಿಗೆ ಗೊತ್ತಿದೆ.



ನಮ್ಮ ಪೊಲೀಸರು ಸಮರ್ಥರಿದ್ದಾರೆ. ತನಿಖೆ ಯಾವ ರೀತಿ ಮುಂದುವರಿದಿದೆ ಎಂಬುದನ್ನು ಜನ ಸಮುದಾಯ ಗಮನಿಸುತ್ತಿದೆ. ಕೆಲವು ರಾಜಕೀಯ ಹೇಳಿಕೆಗಳನ್ನು ಹೊರತುಪಡಿಸಿದರೆ, ತನಿಖೆ ಸರಿಯಾದ ದಾರಿಯಲ್ಲಿ ಹೋಗುತ್ತಿದೆ. ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಗೃಃ ಸಚಿವರ ಸ್ಪಷ್ಟಪಡಿಸಿದರು.

ಜನರು ಸಿಬಿಐ ಗೆ ಕೊಟ್ಟಿದ್ದನ್ನು ಒಪ್ಪಿಲ್ಲ
2008-2013ರವರೆಗೆ ಅಂದಿನ ಸರ್ಕಾರ ಯಾವುದೇ ಒಂದು ಪ್ರಕರಣವನ್ನು ಸಿಬಿಐಗೆ ವಹಿಸಿಲ್ಲ. ಕೆಲವು ಪ್ರಕರಣಗಳಲ್ಲಿ ಸಿಬಿಐ ಕೊಟ್ಟ ವರದಿಯನ್ನು ಜನರು ಒಪ್ಪಿಲ್ಲ. ಅಂತಹ ಪ್ರಕರಣಗಳ ಸಿಬಿಐ ಕಾರ್ಯವೈಖರಿಯನ್ನು ಟೀಕಿಸಿದ್ದನ್ನು ನೋಡಿದ್ದೇವೆ. ಸಿಬಿಐ ಅಂದ ತಕ್ಷಣ ಏನೋ ಆಗಿ ಬಿಡುತ್ತದೆ ಎಂಬ ಪರಿಕಲ್ಪನೆ ಬೇಡ ಎಂದರು.

ಪ್ರಜ್ವಲ್ ರೇವಣ್ಣ ಕೇಸ್: ವಿಡಿಯೋ ನೋಡಿ ನಟಿ ಹರ್ಷಿಕಾ ಪೂರ್ಣಚ್ಚ ಪ್ರತಿಕ್ರಿಯೆ
ಪ್ರಜ್ವಲ್ ರೇವಣ್ಣ ಕೇಸ್: ವಿಡಿಯೋ ನೋಡಿ ನಟಿ ಹರ್ಷಿಕಾ ಪೂರ್ಣಚ್ಚ ಪ್ರತಿಕ್ರಿಯೆ
3 Days ago
ಪ್ರಕರಣವನ್ನು ಎಸ್ಐಟಿಯವರು ಗಂಭೀರವಾಗಿ ತನಿಖೆ ಮಾಡುತ್ತಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ ಎಂಬುದು ಎಲ್ಲರಿಗು ಗೊತ್ತಿದೆ. ಅವರನ್ನು ಕರೆತರಲು ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲಾಗಿದೆ. ಇಂಟರ್ ಪೋಲ್ನವರು 197 ದೇಶಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿಸಿದರು.

ಮಾಜಿ ಸಂಸದರ ವಿಚಾರಣೆ ನಿರ್ಧಾರ
ಹಾಸನದಲ್ಲಿ ಪೆನ್ಡ್ರೈವ್ ಹಂಚಿಕೆ ಹಾಗೂ ಬಹಿರಂಗದ ಬಗ್ಗೆಯೂ ತನಿಖೆಯಾಗಲಿದೆ. ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರನ್ನು ವಿಚಾರಣೆ ನಡೆಸುವ ನಿರ್ಧಾರ ಎಸ್ಐಟಿ ಮಾಡಲಿದೆ. ಪ್ರಕರಣದಲ್ಲಿ ಕೆಲವರನ್ನು ವಿಚಾರಣೆ ಮಾಡಲಾಗುತ್ತಿಲ್ಲ ಎಂದು ಆರೋಪಿಸಲಾಗುತ್ತಿದೆ. ಕಾನೂನಿನ ಚೌಕಟ್ಟಿನಲ್ಲಿ ಯಾವಾಗ ವಿಚಾರಣೆ ನಡೆಸಬೇಕು, ಯಾವಾಗ ಬಂಧಿಸಬೇಕು ಎಂಬುದು ನಮ್ಮ ಕೈಯಲ್ಲಿ ಇಲ್ಲ. ಎಸ್ಐಟಿ ನಿರ್ಧರಿಸಲಿದೆ ಎಂದು ಹೇಳಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)