ಅಮಿತ್ ಶಾ ಜೊತೆಗೂಡಿ ಬಸವರಾಜ್ ಬೊಮ್ಮಾಯಿ ಭರ್ಜರಿ ರಣತಂತ್ರ: ನಟ ಪ್ರಕಾಶ್ ರಾಜ್ ವಿರುದ್ಧ ಕಿಡಿ

Arun Kumar
0

ಹಾವೇರಿ, ಮೇ 01: ಮಾಜಿ ಮುಖ್ಯಮಂತ್ರಿಗಳಾದ ನೀವು, ನಿಮ್ಮ ಶಕ್ತಿ ಸಂಸತ್ಗೆ ಬೇಕಿದೆ. ಕೇಂದ್ರ ಸರ್ಕಾರ, ಹಾವೇರಿ ಒಳಗೊಂಡಂತೆ ದೇಶದ ಅಭಿವೃದ್ಧಿಗೆ ಸಂಕಲ್ಪ ಮಾಡಿದ್ದೇವೆ ಎಂದು ಹಾವೇರಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಇದರ ಬೆನ್ನಲ್ಲೆ ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗೆ ಬೊಮ್ಮಾಯಿ ಅವರ ಜೊತೆಗೂಡಿ ರಣತಂತ್ರ ಹೆಣೆದಿದ್ದಾರೆ.

ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಬುಧವಾರ ಅಮಿತ್ ಶಾ ಅವರು, ಬೃಹತ್ ರೋಡ್ ಶೋ ನಡೆಸಿದರು. ಈ ವೇಳೆ ನೆರೆದಿದ್ದ ಜನಸ್ತೋಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಬಸವರಾಜ ಬೊಮ್ಮಾಯಿ ದೊಡ್ಡ ನಾಯಕರಾಗಿದ್ದು ದೇಶಕ್ಕೆ ಅವರ ಸೇವೆ ಅವಶ್ಯಕತೆ ಇದೇ ಬೊಮ್ಮಾಯಿಯವರನ್ನು ಗೆಲ್ಲಿಸಿ ಕೇಂದ್ರಕ್ಕೆ ಕಳುಹಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತದಾರರಲ್ಲಿ ಮನವಿ ಮಾಡಿದರು.

ದೇಶಕ್ಕೆ ಬೊಮ್ಮಾಯಿ ಸೇವೆ ಅಗತ್ಯ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ದೇಶವನ್ನು ಶಕ್ತಿಶಾಲಿಯನ್ನಾಗಿ ಮಾಡಲು ಶ್ರಮಿಸುತ್ತಿದ್ದಾರೆ. ಈ ಬಾರಿ ಕೇಂದ್ರದಲ್ಲಿ 400 ಸೀಟು ಗೆಲ್ಲುವ ಜೊತೆಗೆ ಬಸವರಾಜ ಬೊಮ್ಮಾಯಿ ಒಳ್ಳೆಯ ನಾಯಕರಿದ್ದಾರೆ. ದೇಶಕ್ಕೆ ಅವರ ಸೇವೆ ಅಗತ್ಯವಿದ್ದು, ಅವರನ್ನು ಹೆಚ್ಚಿನ ಮತಗಳಿಂದ ಆರಿಸಿ ಕಳುಹಿಸಿ ಎಂದರು.

ಇದಕ್ಕೂ ಮೊದಲು ರಾಣೆಬೆನ್ನೂರಿನ ಕುರುಬರಿಗೆ ಕ್ರಾಂಗ್ರೆಸ್ನಿಂದ ಎಂಜಿ ರಸ್ತೆ ಮಾರ್ಗವಾಗಿ ಅಶೋಕ್ ಸರ್ಕಲ್ ವರೆಗೂ ನಡೆದ ಬೃಹತ್ ರೋಡ್ ಶೋನಲ್ಲಿ ಅಮಿತ್ ಪಾಲ್ಗೊಂಡಿದ್ದರು.

ನಟ ಪ್ರಕಾಶ್ ರಾಜ್ ಪೂರ್ವಾಗ್ರಹ ಪೀಡಿತ ವ್ಯಕ್ತಿ
ಇದೇ ವೇಳೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಚಿತ್ರನಟ ಪ್ರಕಾಶ್ ರಾಜ್ ಪೂರ್ವಾಗ್ರಹ ಪೀಡಿತ ವ್ಯಕ್ತಿ. ಅವರು ಏನೇ ಮಾತನಾಡಿದರೂ ಅಜೆಂಡಾ ಇಟ್ಟುಕೊಂಡು ಮಾತನಾಡುತ್ತಾರೆ. ಅವರ ಮಾತಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಹೇಳಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)