ಬೆಂಗಳೂರು ಮಾಲ್‌ಗಳಲ್ಲಿ ಅಗ್ನಿ ದುರಂತ ತಪ್ಪಿಸಲು ಕ್ರಮ, ಡಿಕೆಶಿ ಪತ್ರ

Arun Kumar
0

ಬೆಂಗಳೂರು, ಮೇ 26: ಶನಿವಾರ ಗುಜರಾತ್ನ ರಾಜ್ಕೋಟ್ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಮಕ್ಕಳು ಸೇರಿ 28ಕ್ಕೂ ಅಧಿಕ ಜನರು ಸಜೀವವಾಗಿ ದಹನವಾಗಿದ್ದಾರೆ. ಈ ಘಟನೆ ಬಳಿಕ ಮಾಲ್ ಮತ್ತು ಗೇಮಿಂಗ್ ಝೋನ್ಗಳಲ್ಲಿ ಅಗ್ನಿ ದುರಂತ ತಪ್ಪಿಸಲು ಕೈಗೊಂಡ ಕ್ರಮಗಳ ಬಗ್ಗೆ ಪ್ರಶ್ನೆ ಎದ್ದಿದೆ.

ಕರ್ನಾಟಕದ ಉಪ ಮುಖ್ಯಮಂತ್ರಿ, ಬೆಂಗಳೂರು ನಗರ ಉಸ್ತುವಾರಿ ಸಚಿವ ಡಿ. ಕೆ. ಶಿವಕುಮಾರ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರವೊಂದನ್ನು ಬರೆದಿದ್ದಾರೆ. ಸಂಭವನೀಯ ಅಗ್ನಿ ದುರಂತಗಳನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆಯೇ ಎಂದು ಪರಿಶೀಲಿಸಲು ಪತ್ರದಲ್ಲಿ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿರುವ ಮಾಲ್ಗಳು, ಗೇಮ್ ಝೋನ್ಗಳು, ಮನರಂಜನಾ ಕೇಂದ್ರಗಳಲ್ಲಿ ಅಗ್ನಿ ಅವಘಡ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆಯೇ? ಎಂಬುದನ್ನು ಪರಿಶೀಲಿಸಲಾಗುತ್ತಿದ್ದು, ಈ ಸಂಬಂಧ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಡಿ. ಕೆ. ಶಿವಕುಮಾರ್ ಪೋಸ್ಟ್ ಹಾಕಿದ್ದಾರೆ.

ಡಿಕೆಶಿ ಪತ್ರದ ವಿವರ: ಗುಜರಾತ್ನ ರಾಜ್ ಕೋಟ್ ಮನರಂಜನಾ ಕೇಂದ್ರದಲ್ಲಿ (ಗೇಮ್ ಝೋನ್) ಶನಿವಾರ ಸಂಜೆ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿರುವುದು ವರದಿಯಾಗಿದ್ದು, ಇದು ಅತ್ಯಂತ ಕಳವಳಕಾರಿ ದುರ್ಘಟನೆಯಾಗಿರುತ್ತದೆ.

ಈ ದುರಂತವು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದ್ದು, ಬೆಂಗಳೂರಿನ ಹಲವು ಪ್ರತಿಷ್ಠಿತ ಮಾಲ್ಗಳಲ್ಲಿ ಮತ್ತು ಇತರೆ ಸ್ಥಳಗಳಲ್ಲಿ ಗೇಮ್ ಝೇನ್ ಹಾಗೂ ಸಾಹಸ ಕ್ರೀಡೆಗಳನ್ನು ನಡೆಸಲು ಅನುಮತಿ ನೀಡಲಾಗಿದ್ದು, ಇಂತಹ ಮನರಂಜನಾ ಕೇಂದ್ರಗಳು/ ಗೇಮ್ ಝೋನ್ಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಹಿಸಬೇಕಿರುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಮಜನರಂಜನಾ ಕೇಂದ್ರ/ ಗೇಮಿಂಗ್ ಝೋನ್ಗಳಿರುವ ಪ್ರದೇಶದಲ್ಲಿ ಅಗ್ನಿದುರಂತ ಸೇರಿದಂತೆ ಯಾವುದೇ ಅನಾಹುತ ಸಂಭವಿಸದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಂಡು, ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ? ಎಂದು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಲು ಮತ್ತು ಈಗಾಗಲೇ ವಿಧಿಸಲಾಗಿರುವ ರಕ್ಷಣಾ ನಿಯಮ ಮತ್ತು ನಿರ್ಬಂಧಗಳನ್ನು ಪಾಲನೆ ಮಾಡಲಾಗುತ್ತಿದೆಯೇ? ಎಂದು ಪರಿಶೀಲಿಸಲು ತಿಳಿಸುತ್ತಾ, ಯಾವುದೇ ದುರ್ಘಟನೆಗಳು ಸಂಭವಿಸದಂತೆ ಕ್ರಮವಹಿಸಲು ಸೂಚಿಸಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)