ಎಚ್‌ಡಿ ಕುಮಾರಸ್ವಾಮಿ ಮೋದಿ ಸಂಪುಟಕ್ಕೆ ಎಂಟ್ರಿ- ಕೇರಳ ಜೆಡಿಎಸ್ ಎಕ್ಸಿಟ್

Arun Kumar
0

ಎಚ್.ಡಿ.ಕುಮಾರಸ್ವಾಮಿ ಮೋದಿ ಸಂಪುಟಕ್ಕೆ ಎಂಟ್ರಿ ಕೊಡುತ್ತಿದ್ದಂತೆ ಕೇರಳ ಜೆಡಿಎಸ್ ಪಕ್ಷದಿಂದ ಎಕ್ಸಿಟ್ ಆಗಲು ನಿರ್ಧರಿಸಿದೆ. ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ನೇತೃತ್ವದ ಅಧಿಕೃತ ಜೆಡಿಎಸ್ ಪಕ್ಷದಿಂದ ದೂರ ಉಳಿಯಲು ಕೇರಳ ಜೆಡಿಎಸ್ ನಿರ್ಧರಿಸಿದ್ದು ಹೊಸ ಪಕ್ಷ ಸ್ಥಾಪಿಸಲು ತೀರ್ಮಾನಿಸಿದೆ.

ಜನತಾ ದಳ ಜಾತ್ಯತೀತ) ನ ಕೇರಳ ಘಟಕ ತನ್ನ ಪ್ರಸ್ತುತ ಪಕ್ಷದ ಹೆಸರನ್ನು ಕೈಬಿಟ್ಟು ಹೊಸ ರಾಜಕೀಯ ಘಟಕವನ್ನು ರಚಿಸುವ ಮೂಲಕ ತನ್ನನ್ನು ಮರುಬ್ರಾಂಡ್ ಮಾಡಲು ತೀರ್ಮಾನಿಸಿದೆ.

ಮಂಗಳವಾರ 18 ಜೂನ್ JD (S) ರಾಜ್ಯ ಅಧ್ಯಕ್ಷ ಮ್ಯಾಥ್ಯೂ ಟಿ ಥಾಮಸ್ ಅವರು ರಾಜ್ಯ ಸಮಿತಿ ಸಭೆಯ ನಂತರ ಮಾತನಾಡಿ ಪಕ್ಷಕ್ಕೆ ಹೊಸ ಹೆಸರನ್ನು ನೋಂದಾಯಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದಾಗಿ ಹೇಳಿದರು. ಕಾನೂನು ಪರಿಗಣನೆಗಳ ಪರಿಶೀಲನೆಯಿಂದಾಗಿ ಹೆಸರು ಬದಲಾಯಿಸುವ ನಿರ್ಧಾರ ಬಾಕಿ ಉಳಿದಿದೆ ಎಂದು ಅವರು ಹೇಳಿದರು.

ಜೆಡಿಎಸ್ ಬಿಜೆಪಿಯಿಂದ ದೂರವಾದರೆ ಮಾತ್ರ ಕೇರಳ ಘಟಕ ಜೆಡಿಎಸ್ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತದೆ ಎಂದು ಥಾಮಸ್ ಹೇಳಿದ್ದಾರೆ. ಪ್ರಸ್ತುತ, ಕೇರಳ ವಿಧಾನಸಭೆಯಲ್ಲಿ ಜೆಡಿ(ಎಸ್) ಥಾಮಸ್ ಮತ್ತು ಕೆ ಕೃಷ್ಣನ್ಕುಟ್ಟಿ ಎಂಬ ಇಬ್ಬರು ಶಾಸಕರನ್ನು ಹೊಂದಿದೆ. ಸಚಿವ ಸಂಪುಟದಲ್ಲಿ ಕೆ.ಕೃಷ್ಣನ್ ಕುಟ್ಟಿ ಇಂಧನ ಸಚಿವರಾಗಿದ್ದಾರೆ.

ಜೆಡಿಎಸ್ ಕೇರಳದಲ್ಲಿ ಪಿಣರಾಯಿ ನೇತೃತ್ವದಲ್ಲಿ ಎಲ್ ಡಿಎಫ್ ಸರ್ಕಾರದಲ್ಲಿ ಮೈತ್ರಿ ಹೊಂದಿದೆ. ಇತ್ತ ಕುಮಾರಸ್ವಾಮಿ ಅವರು ಕೇಂದ್ರದ ಎನ್ ಡಿಎ ಸರ್ಕಾರದಲ್ಲಿ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಹೀಗಾಗಿ ಕೇರಳದಲ್ಲಿ ಎಲ್ಡಿಎಫ್-ಎನ್ಡಿಎ ಮೈತ್ರಿಕೂಟ ಆಡಳಿತ ನಡೆಸುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಕಳೆದ ಸೆಪ್ಟೆಂಬರ್ನಲ್ಲಿ ಜೆಡಿ(ಎಸ್) ಎನ್ಡಿಎಗೆ ಸೇರ್ಪಡೆಗೊಂಡಿತ್ತು. ಆದರೆ ಸಿಎಂ ವಿಜಯನ್ ಮತ್ತು ಆಡಳಿತಾರೂಢಸಿಪಿಐ(ಎಂ) ಈ ವಿಚಾರದಲ್ಲಿ ಮೌನ ವಹಿಸಿದ್ದಾರೆ ಮತ್ತು ಜೆಡಿಎಸ್ ಜೊತೆ ಮೈತ್ರಿ ಮುಂದುವರೆಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)